10 ಕಿ.ಮೀ ಮ್ಯಾರಥಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿ ತೃತೀಯ

0

ಅ. 31 ರಂದು ಮಂಗಳೂರಿನಲ್ಲಿ ಭಾರತೀಯ ಕರಾವಳಿ ಪಡೆಯವರು ನಡೆಸಿದ ‘ರನ್ ಫಾರ್ ಯುನಿಟೀ’ 10 ಕಿ.ಮೀ ಮ್ಯಾರಥಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿ ತೃತೀಯ ಸ್ಥಾನದೊಂದಿಗೆ ರೂ. 2000/_ ನಗದು ಪುರಸ್ಕಾರ ಪಡೆದುಕೊಂಡಿದ್ದಾರೆ.

ಬಳ್ಪ ಶಾಲೆಯ ಹಳೆ ವಿದ್ಯಾರ್ಥಿಯಾಗಿರುವ ಇವರು ಪ್ರಸ್ತುತ ಮಂಗಳೂರಿನ ಕೇಂಬ್ರಿಡ್ಜ್ ಹೈಸ್ಕೂಲಿನಲ್ಲಿ ದೈಹಿಕ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ಬಳ್ಪ ಗ್ರಾಮದ ಕೊಡೆಂಕಿರಿ ವಾಚಣ್ಣ ಗೌಡ ಮತ್ತು ದಮಯಂತಿ ದಂಪತಿಯ ಪುತ್ರಿ.