ಅ.08 : ಐವರ್ನಾಡಿನಲ್ಲಿ ಸೌಜನ್ಯ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನೆ

0

ಸೌಜನ್ಯ ಪರ ಹೋರಾಟ ಸಮಿತಿ ಐವರ್ನಾಡು ಇದರ ನೇತೃತ್ವದಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಮಹೇಶ್ ಶೆಟ್ಟಿ ತಿಮರೋಡಿಯವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆಯು ಅ.08 ರಂದು ಐವರ್ನಾಡಿನಲ್ಲಿ ನಡೆಯಲಿದೆ.
ಸಭೆಯಲ್ಲಿ ತುಳು ಜಾನಪದ ವಾಗ್ಮಿ ತಮ್ಮಣ್ಣ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಪ್ರಸನ್ನ ರವಿ, ಸೌಜನ್ಯಳ ತಾಯಿ ಕುಸುಮಾವತಿ, ನಿವೃತ್ತ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟನವರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಾರ್ವಜನಿಕರು ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘಟಕರು ತಿಳಿಸಿದ್ದಾರೆ.