ಜ 15 – 21 : ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ಜಾತ್ರಾ ಮಹೋತ್ಸವ

0

ಜ.10 ರಂದು ಗೊನೆ ಮುಹೂರ್ತ


ಜ.16 ರಂದು ಧ್ವಜಾರೋಹಣ

ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ಜ.15 ರಿಂದ ಜ.21 ರವರೆಗೆ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಜ.10 ರಂದು ಬೆಳಿಗ್ಗೆ ಗಂಟೆ 9.30 ಕ್ಕೆ ಗೊನೆ ಮುಹೂರ್ತ ನಡೆಯಲಿದೆ.
ಜ.15 ರಂದು ಸಂಜೆ ದೇವತಾ ಪ್ರಾರ್ಥನೆ,ಆಚಾರ್ಯವರಣ,ಸ್ವಸ್ತಿಪುಣ್ಯಾಹವಾಚನ,ಸ್ಥಳಶುದ್ಧಿ,ಪ್ರಾಸಾದ ಶುದ್ಧಿ ,ರಾಕ್ಷೋಘ್ನ ಹೋಮ,ವಾಸ್ತುಹೋಮ,ವಾಸ್ತು ಪೂಜಾ ಬಲಿ,ನೂತನ ಬಿಂಬ ಜಲಾಧಿವಾಸ,ಪ್ರಸಾದ ವಿತರಣೆ ನಡೆಯಲಿದೆ.
ಜ.16 ರಂದು ಬೆಳಿಗ್ಗೆ ಗಂಟೆ 9.10 ರಿಂದ 9-45 ರ ಕುಂಭ ಲಗ್ನದಲ್ಲಿ ಶ್ರೀ ಕಲ್ಲುರ್ಟಿ ಮತ್ತು ಕಲ್ಕುಡ ದೈವದ ಪ್ರತಿಷ್ಠೆ ,ಸಾನ್ನಿಧ್ಯ ಕಲಶಾಭಿಷೇಕ,ತಂಬಿಲ ಸೇವೆ,ಮಂಗಳಾರತಿ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.


ಜ.16 ರಂದು ಬೆಳಿಗ್ಗೆ ಗಂಟೆ 10.00 ಕ್ಕೆ ಉಗ್ರಾಣ ಮುಹೂರ್ತ, ಮದ್ಯಾಹ್ನ ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.ರಾತ್ರಿ ಗಂಟೆ 7.00 ಕ್ಕೆ ದೇವತಾ ಪ್ರಾರ್ಥನೆ,ಧ್ವಜಾರೋಹಣ ನಡೆಯಲಿದೆ.ನಂತರ ಶ್ರೀ ದೇವರ ಬಲಿ ಹೊರಟು ಉತ್ಸವ,ವಸಂತ ಕಟ್ಟೆ ಪೂಜೆ ನಡೆಯಲಿದೆ.


ಜ.17 ರಂದು ಬೆಳಿಗ್ಗೆ ಗಂಟೆ 8.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ,ವಸಂತ ಕಟ್ಟೆ ಪೂಜೆ,ಅನ್ನಸಂತರ್ಪಣೆ ನಡೆಯಲಿದೆ.


ಜ.18 ರಂದು ಬೆಳಿಗ್ಗೆ ಗಂಟೆ 8.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ದರ್ಶನ ಬಲಿ,ಬಟ್ಟಲು ಕಾಣಿಕೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.

ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ,ದೀಪೋತ್ಸವ ,ವಸಂತ ಕಟ್ಟೆ ಪೂಜೆ ನಡೆಯಲಿದೆ.
ಜ.,19 ರಂದು ಬೆಳಿಗ್ಗೆ ಗಂಟೆ 8.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ ಗಂಟೆ 7.00 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ವಸಂತಕಟ್ಟೆ ಪೂಜೆ,ಸವಾರಿ ಹೋಗಿ ಬಂದು ಬೆಡಿಕಟ್ಟೆಯಲ್ಲಿ ಸಿಡಿಮದ್ದು ಪ್ರದರ್ಶನ ನಡೆಯಲಿದೆ.

ರಾತ್ರಿ ಗಂಟೆ 10.30 ಕ್ಕೆ ಮಹಾಪೂಜೆ ,ನಂತರ ದೇವರ ಬಲಿ ಹೊರಟು ಶ್ರೀ ಭೂತ ಬಲಿ ಉತ್ಸವ,ಶಯನೋತ್ಸವ,ಕವಾಟ ಬಂಧನ,ಅನ್ನಸಂತರ್ಪಣೆ ನಡೆಯಲಿದೆ.
ಜ.20 ರಂದು ಬೆಳಿಗ್ಗೆ ಕವಾಟೋದ್ಘಾಟನೆ ,ಶ್ರೀ ದೇವರಿಗೆ ತೈಲಾಭಿಷೇಕ,ಪಂಚಾಮೃತಾಭಿಷೇಕ,ಸೀಯಾಳಾಭಿಷೇಕ,ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ.

ಮಧ್ಯಾಹ್ನ ಗಂಟೆ 12.00 ಕ್ಕೆ ತುಲಾಭಾರ ಸೇವೆ,ಯಾತ್ರಾ ಹೋಮ,ಪ್ರಸಾದ ವಿತರಣೆ ,ಅನ್ನಸಂತರ್ಪಣೆ,ಶ್ರೀ ದೇವರ ಬಲಿಹೊರಟು ಕಟ್ಟೆಪೂಜೆ,ಅವಭೃತ ಸ್ನಾನ ಆಗಿ ದೇವಸ್ಥಾನಕ್ಕೆ ಬಂದು ಧ್ವಜಾವರೋಹಣ ,ಮಹಾಪೂಜೆ,ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ .ನಂತರ ಉಳ್ಳಾಕುಲು,ಮೈಷಂತಾಯ ದೈವದ ಭಂಡಾರ ತೆಗೆಯುವುದು.


ಜ.21 ರಂದು ಬೆಳಿಗ್ಗೆ ಗಂಟೆ 7.00 ಕ್ಕೆ ಮಹಾಗಣಪತಿ ಹೋಮ,ಪಂಚವಿಂಶತಿ ಕಲಶ ಪೂಜೆ,ಶ್ರೀ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮೋತ್ಸವ ನಡೆಯಲಿದೆ.
ಪ್ರಸಾದ ವಿತರಣೆ ಪಿಲಿಭೂತದ ಭಂಡಾರ ತೆಗೆಯುವುದು.
ಮಧ್ಯಾಹ್ನ ಶ್ರೀ ದೇವರಿಗೆ ಸಂಪ್ರೋಕ್ಷಣೆ,ಕಲಶಾಭಿಷೇಕ,ಮಹಾಪೂಜೆ,ವೈದಿಕ ಮಂತ್ರಾಕ್ಷತೆ,ಪ್ರಸಾದ ವಿತರಣೆ,ಮಹಾಅನ್ನಸಂತರ್ಪಣೆ ನಡೆಯಲಿದೆ.
ಅ.ಗಂಟೆ 3.00 ರಿಂದ ಪಿಲಿಭೂತದ ನೇಮೋತ್ಸವ,ಪ್ರಸಾದ ವಿತರಣೆ ,ಅನ್ನಸಂತರ್ಪಣೆ ನಡೆಯಲಿದೆ.

ರಾತ್ರಿ ಶ್ರೀ ಕಲ್ಲು ರ್ಟಿ ದೈವದ ನೇಮ ಬಳಿಕ ಪ್ರಸಾದ ವಿತರಣೆ ನಡೆಯಲಿದೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ.