ನ. 14 ರಂದು ಸಚಿವ ಅಂಗಾರವರಿಂದ ಅರಂತೋಡು ಶಾಲಾ ನೂತನ ಕೊಠಡಿ ಉದ್ಘಾಟನೆ

0



ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಸಹಯೋಗದಲ್ಲಿ ಅಮೃತ ಶಾಲಾ ಸೌಲಭ್ಯ ಯೋಜನೆಯಡಿಯಲ್ಲಿ ನಿರ್ಮಿಸಲಾದ  ನೂತನ ಶಾಲಾ ಕೊಠಡಿಯನ್ನು ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವರಾದ ಅಂಗಾರರವರು ನವಂಬರ್ 14 ರಂದು ಉದ್ಘಾಟಿಸಲಿದ್ದಾರೆ. 




ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ದೇರಾಜೆ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದ ಅತಿಥಿಗಳಾಗಿ ಮೀನುಗಾರಿಕಾ ಅಭಿವೃದ್ಧಿ  ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ವೇತಾ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಎಸ್.ಪಿ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಹನುಮತರಾಯ, ಗ್ರಾಮ ಪಂಚಾಯತ್ ಸದಸ್ಯರಾದ ಶಿವಾನಂದ ಕುಕ್ಕುಂಬಳ, ಮಾಲಿನಿ ವಿನೋದ್, ಪುಷ್ಪಾದರ ಕೊಡಂಕೇರಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶೀತಲ್, ಶಿಕ್ಷಣ ಸಂಯೋಜಕ ಚಂದ್ರಶೇಖರ್, ಸಂಪನ್ಮೂಲ ವ್ಯಕ್ತಿ ಮಹೇಶ್ ಮೊದಲಾದವರು ಭಾಗವಹಿಸಲಿದ್ದಾರೆಂದು ಶಾಲಾ ಮುಖ್ಯೋಪದ್ಯಾಯರಾದ ಗೋಪಾಲಕೃಷ್ಣ ಬನ  ತಿಳಿಸಿದ್ದಾರೆ.