ಫೆ.08 ರಿಂದ ಫೆ 10 : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, *ಫೆ.10 ರಂದು ದರ್ಶನ ಬಲಿ, ಬಟ್ಟಲು ಕಾಣಿಕೆ

0

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.08 ರಿಂದ ಫೆ.10 ರವರೆಗೆ ವಿವಿಧ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಫೆ 02 ರಂದು ಗೊನೆ ಕಡಿಯಲಾಗುವುದು.ಫೆ 08 ರಂದು ಬೆಳಿಗ್ಗೆ ,8.30 ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ,ಗಂಟೆ 10.00 ಕ್ಕೆ ಉಗ್ರಾಣ ತುಂಬುವುದು.ಗಂಟೆ 12.00 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.ರಾತ್ರಿಗಂಟೆ 7.30 ರಿಂದ ರಂಗಪೂಜೆಗಳು ನಡೆಯಲಿದೆ.

ಫೆ.09 ರಂದು ಬೆಳಿಗ್ಗೆ ಗಂಟೆ 9.00 ರಿಂದ ಶತರುದ್ರಾಭಿಷೇಕ, ಅಶ್ವಥ್ಥನಾರಾಯಣ ಪೂಜೆ,108 ಕಾಯಿ ಗಣಪತಿ ಹೋಮ ನಡೆಯಲಿದೆ.ಪೂರ್ವಾಹ್ನ ಗಂಟೆ 10.30 ರಿಂದ ಭಜನೆ,ನಂತರ ಕಲಶಾಭಿಷೇಕಗಳು ನಡೆಯಲಿದೆ.ಪೂರ್ವಾಹ್ನ ಗಂಟೆ 12.30 ರಿಂದ ಮಹಾಪೂಜೆ,ಪ್ರಸಾದ ವಿತರಣೆ ,ಅನ್ನಸಂತರ್ಪಣೆ ನಡೆಯಲಿದೆ.ರಾತ್ರಿ ಗಂಟೆ 6.00 ಕ್ಕೆ ಶ್ರೀ ವಿಷ್ಣು ಸಹಸ್ರನಾಮ,ಲಲಿತ ಸಹಸ್ರನಾಮ ಪಾರಾಯಣ ನಡೆಯಲಿದೆ.ರಾತ್ರಿ ಗಂಟೆ 7.00 ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ ನಡೆಯಲಿದೆ.

ಫೆ.10 ರಂದು ಪೂರ್ವಾಹ್ನ ಗಂಟೆ 8.30 ಕ್ಕೆ ಕೊಯಿಲ ಉಳ್ಳಾಕುಲು ದೈವಗಳ ಭಂಡಾರ ಬರುವುದು.ಪೂರ್ವಾಹ್ನ ಗಂಟೆ 9.30 ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ ,ಬಟ್ಟಲು ಕಾಣಿಕೆ,ಶುದ್ಧಿ ಕಲಶ ನಡೆಯಲಿದೆ.ಪೂರ್ವಾಹ್ನ ಗಂಟೆ 12.30 ಕ್ಕೆ ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.ರಾತ್ರಿ ಗಂಟೆ 10.00 ರಿಂದ ದೈವಗಳ ನಡಾವಳಿ ನಡೆಯಲಿದೆ.

*ಸಾಂಸ್ಕೃತಿಕ ಕಾರ್ಯಕ್ರಮಗಳು*

ಫೆ.08 ರಂದು ರಾತ್ರಿ ಗಂಟೆ 8.30 ರಿಂದ ಶ್ರೀ ಪಂಚಲಿಂಗೇಶ್ವರ ಸಾಂಸ್ಕೃತಿಕ ಕಲಾ ವೇದಿಕೆ ಆಶ್ರಯದಲ್ಲಿ ಶ್ರೀ ಮೂಕಾಂಬಿಕ ಕಲ್ಚರಲ್ ಅಕಾಡೆಮಿ ಪುತ್ತೂರು ಇದರ ಕಲಾವಿದರಿಂದ ಸಂಪೂರ್ಣ ರಾಮಾಯಣ ನೃತ್ಯ ರೂಪಕ ನಡೆಯಲಿದೆ.

ಫೆ.9 ರಂದು ರಾತ್ರಿ ಗಂಟೆ 10.00 ರಿಂದ ನಿನಾದ ಸಾಂಸ್ಕೃತಿಕ ಕಲಾ ಕೇಂದ್ರ ತಂಟೆಪ್ಪಾಡಿ ಪ್ರಸ್ತುತ ಪಡಿಸುವ ವೈವಿಧ್ಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಫೆ.10 ರಂದು ಸಂಜೆ ಗಂಟೆ 6.30 ರಿಂದ ಶ್ರೀಧರ ಖಂಡಿಗೆಮೂಲೆ ಇವರಿಂದ ಗಾನ ವೈಭವ ನಡೆಯಲಿದೆ.ಸಂಜೆ ಗಂಟೆ 7.00 ರಿಂದ ಯಕ್ಷಸಿರಿ ಕಲಾ ವೇದಿಕೆ ಖಂಡಿಗೆಮೂಲೆ ಇವರಿಂದ “ವೀರ ಬಭ್ರುವಾಹನ” ನಡೆಯಲಿದೆಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮಡ್ತಿಲ ತಿಳಿಸಿದ್ದಾರೆ.