ಮಾ.27 – 28: ಕನಕಮಜಲು ಬಾಳೆಹಿತ್ತಿಲು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಉತ್ಸವ

0

ಕನಕಮಜಲು ಗ್ರಾಮದ ಬಾಳೆಹಿತ್ತಿಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಒತ್ತೆಕೋಲ ಉತ್ಸವವು ಮಾ.27 ‌ಮತ್ತು 28ರಂದು ಜರುಗಲಿದೆ.

ಮಾ.20ರಂದು ಒತ್ತೆಕೋಲಕ್ಕೆ ಮುಹೂರ್ತದ ಗೊನೆ ಕಡಿಯಲಾಯಿತು. ಮಾ.27ರಂದು ಬೆಳಿಗ್ಗೆ ರಕ್ತೇಶ್ವರಿ, ನಾಗ ಮತ್ತು ಗುಳಿಗ ದೈವದ ತಂಬಿಲ ನಡೆಯಲಿದೆ.
ರಾತ್ರಿ ದೈವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಭಂಡಾರ ತೆಗೆದು, ಮೇಲೇರಿಗೆ ಅಗ್ನಿಸ್ಪರ್ಶ, ಅನ್ನಸಂತರ್ಪಣೆ ಜರುಗಲಿದೆ. ಬಳಿಕ ಶ್ರೀ ಮಹಾವಿಷ್ಣುಮೂರ್ತಿ ದೈವದ ಕುಳ್ಚಾಟ – ವಿಷ್ಣುಲೀಲೆ ಜರುಗಲಿದೆ.


ಮಾ.28ರಂದು ಪ್ರಾತ:ಕಾಲ ಶ್ರೀ ವಿಷ್ಣುಮೂರ್ತಿ ದೈವದ ಕೆಂಡಸೇವೆ, ಮಾರಿಕಳ, ಪ್ರಸಾದ ವಿತರಣೆ ಜರುಗಲಿದೆ.